July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!