September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya
error: Content is protected !!