24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

ಕಳೆಂಜ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಫೆ.24 ರಂದು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ವಿಶ್ವನಾಥ ಹೆಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

2024 – 25ನೇ ಸಾಲಿನ ವಿಶೇಷಚೇತನರ ಕುರಿತಾದ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶ್ರೀಮತಿ ವಿಮಲಾ ಎನ್ ವಾಚಿಸಿದರು.


ಸಭೆಯಲ್ಲಿ ಬೆಳ್ತಂಗಡಿ ತಾಲ್ಲೂಕು ವಿಶೇಷಚೇತನರ ವಿವಿಧೋದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರು ಉಪಸ್ಥಿತರಿದ್ದು ವಿಶೇಷಚೇತನರಿಗೆ ಸರಕಾರದಿಂದ ಹಾಗೂ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.


ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ ಇವರ ಸಹಯೋಗದಲ್ಲಿ ವಿಶೇಷಚೇತನರಿಗೆ ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 60 ಮಂದಿ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
ಸಭೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಎಂ ಬಿ ಕೆ, ವಿಶೇಷಚೇತನರು ಮತ್ತು ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ನಿರೂಪಿಸಿ, ಸ್ವಾಗತಿಸಿದರು. ವಿ ಆರ್ ಡಬ್ಲ್ಯೂ ಶ್ರೀಮತಿ ವಿಮಲಾ ಎನ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!