25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಶಾಲಾ ಎಸ್ ಡಿ ಎಂ ಸಿ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಶಾಲಾ ವಿದ್ಯಾರ್ಥಿಗಳ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ ಜರುಗಿತು.


ಎ ಜೆ ಆಸ್ಪತ್ರೆಯ ವೈದ್ಯರಾದ ಡಾ ಶಿಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮರ್ ಫಾರೂಕ್, ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಹಾಜಿ ಲತೀಫ್, ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮುಸ್ತಫಾ, ಪಡಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಐಶ್ವರ್ಯ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಶಿವಾನಿ ಹಾಗೂ ಶಾಲಾ ಆರೋಗ್ಯ ಮಂತ್ರಿ ಮುಫೀದಾ ಬಾನು ಉಪಸ್ಥಿತರಿದ್ದರು.

102 ವಿದ್ಯಾರ್ಥಿಗಳು 5 ಮಂದಿ ಎಸ್ ಡಿ ಎಂ ಸಿ ಸದಸ್ಯರು ಚಿಕಿತ್ಸೆ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya
error: Content is protected !!