24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ತೆಕ್ಕಾರು : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಬಾರ್ಯ ತೆಕ್ಕಾರು ಪುತ್ತಿಲ ಗ್ರಾಮಗಳ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಶ್ರೀ ಕೊರಗಜ್ಜ ಕ್ಷೇತ್ರ ಮುಜ್ಜಾಲೆ ಬಾರ್ಯ ಇಲ್ಲಿ ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ರವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು .


ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಡಾ. ರಾಜಾರಾಮ್, ಗ್ರಾಮ ಸಮಿತಿ ಅಧ್ಯಕ್ಷರುಗಳಾದ ಶೇಷಪ್ಪ ಸಾಲಿಯನ್ ಬರ್ಯಾ ಗುತ್ತು ,ದಿನೇಶ್ ಸುಣ್ಣಾಜೆ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಗುಣಕರ ಅಗ್ನಾಡಿ, ಕೃಷ್ಣಪ್ಪ ಪೈಂದಗುತ್ತು, ವಿಶ್ವನಾಥ್ ಸುನ್ನಾಜೆ, ದಿನಕರ್ ಮುಜ್ಜಾಲೆ ,ಚಿದಾನಂದ ಪೋಸ್ಟ್ ಮಾಸ್ಟರ್, ಶ್ರೀಧರ, ಅರುಣ ಬಜಕ್ಕಲ, ಪ್ರವೀಣ್ ಬಜಕ್ಕಲ, ಕಿಶೋರ್ ಚಂದ್ರ, ಕರುಣಾಕರ, ಗುಣಕರ ಮುಗ್ಗ, ಧನುಷ್, ಪ್ರವೀಣ್ ಬಂಗೇರ, ಪುನೀತ್, ಜಿತೇಶ್ ಹರೀಶ್ ಪೇಲತ್ತಾಜೇ ,ಪ್ರಿತೇಶ್, ಸ್ನೇಹ ಕಿಶೋರ್, ಶ್ವೇತಾ ದಿನೇಶ್, ವಿಮಲಾ ಸುಣ್ಣಜೆ, ಸಂಧ್ಯಾ ಗುಣಕರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಾವತಿ, ಸ್ವಾತಿ, ವೇದಾವತಿ ದಿನಕರ್, ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸೇರಿದ್ದರು,


ಶ್ರೀ ಕ್ಷೇತ್ರ ಗೆಜ್ಜೆಗಿರಿ ಕಣಿಯೂರು ವಲಯ ಸಂಚಾಲಕರೂ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕಿ ಶ್ರೀಮತಿ ಉಷಾ ಶರತ್ ರವರು ಕಾರ್ಯಕ್ರಮವನ್ನು ಸಂಘಟಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಗುರು ನಾರಾಯಣ ಸೇವಾ ಸಂಘದ ನಿರ್ದೇಶಕರಾದ ಗುಣಕರ ಅಗ್ನಾಡಿ ಯವರ ಧನ್ಯವಾದವಿತ್ತರು.

Related posts

ಡಿ.26 ವಿದ್ಯುತ್ ನಿಲುಗಡೆ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!