23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

ಮುಂಡಾಜೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ವಾಹಿನಿ ಸಂಚಲನ ಸಮಿತಿ, ಮುಂಡಾಜೆ ಇದರ ಆತಿಥ್ಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ ” ಎಂಬ ಶೀರ್ಷಿಕೆಯ ಅಡಿಯಲ್ಲಿ ಫೆ.23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಶವ ಮುಂಡಾಜೆ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಮುಂಡಾಚೆ ಇದರ ಸಂಚಾಲಕ ಗಣೇಶ್ ಬಂಗೇರ ನೆರವೇರಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಆಗಮಿಸಿ, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಸ್ಮಿತೇಶ್ ಬಾರ್ಯರವರು ಆಗಮಿಸಿದ್ದರು. ಇವರು ಪರೀಕ್ಷಾ ನಿರ್ವಹಣೆಯಲ್ಲಿ ಪೋಷಕರ ಪಾತ್ರ ಹಾಗೂ ಮಕ್ಕಳಿಗೆ ಪರೀಕ್ಷಾ ತಯಾರಿಯ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.

ವೇದಿಕೆಯಲ್ಲಿ ಯುವ ವಾಹಿನಿ ಸಂಚಲನ ಸಮಿತಿ ಮುಂಡಾಜೆ ಇದರ ಗೌರವ ಅಧ್ಯಕ್ಷರಾಗಿರುವ ಬಾಬು ಪೂಜಾರಿ ಕೂಳೂರು ಉಪಸ್ಥಿತರಿದ್ದರು. ಕೇಶವ ಮುಂಡಾಜೆ ಇವರು ಅಧ್ಯಕ್ಷೀಯ ನುಡಿಗಳನ್ನಾಡಿದರು.
ನಿಶ್ಮಿತಾರವರು ಕಾರ್ಯಕ್ರಮಕ್ಕೆ ಬಂದಿರುವಂತಹ ಅತಿಥಿಗಳನ್ನು ಸ್ವಾಗತಿಸಿದರು. ವಿತೇಶ್ ಕೋಟ್ಯಾನ್ ಧನ್ಯವಾದವಿತ್ತರು. ಜಿತೀಕ್ಷಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya
error: Content is protected !!