25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya
error: Content is protected !!