April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya
error: Content is protected !!