September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya
error: Content is protected !!