22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya
error: Content is protected !!