July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ.25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿಗಳಾದ ಸುಶೀಲ ರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ನಳಿನಿ, ಶ್ರೀಮತಿ ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.

Related posts

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya
error: Content is protected !!