September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ.25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿಗಳಾದ ಸುಶೀಲ ರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ನಳಿನಿ, ಶ್ರೀಮತಿ ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!