22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya
error: Content is protected !!