23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya
error: Content is protected !!