29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಶಾಲಾ ಎಸ್ ಡಿ ಎಂ ಸಿ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಶಾಲಾ ವಿದ್ಯಾರ್ಥಿಗಳ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ ಜರುಗಿತು.


ಎ ಜೆ ಆಸ್ಪತ್ರೆಯ ವೈದ್ಯರಾದ ಡಾ ಶಿಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮರ್ ಫಾರೂಕ್, ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಹಾಜಿ ಲತೀಫ್, ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮುಸ್ತಫಾ, ಪಡಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಐಶ್ವರ್ಯ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಶಿವಾನಿ ಹಾಗೂ ಶಾಲಾ ಆರೋಗ್ಯ ಮಂತ್ರಿ ಮುಫೀದಾ ಬಾನು ಉಪಸ್ಥಿತರಿದ್ದರು.

102 ವಿದ್ಯಾರ್ಥಿಗಳು 5 ಮಂದಿ ಎಸ್ ಡಿ ಎಂ ಸಿ ಸದಸ್ಯರು ಚಿಕಿತ್ಸೆ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!