25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

ಮುಂಡಾಜೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ವಾಹಿನಿ ಸಂಚಲನ ಸಮಿತಿ, ಮುಂಡಾಜೆ ಇದರ ಆತಿಥ್ಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ ” ಎಂಬ ಶೀರ್ಷಿಕೆಯ ಅಡಿಯಲ್ಲಿ ಫೆ.23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಶವ ಮುಂಡಾಜೆ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಮುಂಡಾಚೆ ಇದರ ಸಂಚಾಲಕ ಗಣೇಶ್ ಬಂಗೇರ ನೆರವೇರಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಆಗಮಿಸಿ, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಸ್ಮಿತೇಶ್ ಬಾರ್ಯರವರು ಆಗಮಿಸಿದ್ದರು. ಇವರು ಪರೀಕ್ಷಾ ನಿರ್ವಹಣೆಯಲ್ಲಿ ಪೋಷಕರ ಪಾತ್ರ ಹಾಗೂ ಮಕ್ಕಳಿಗೆ ಪರೀಕ್ಷಾ ತಯಾರಿಯ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.

ವೇದಿಕೆಯಲ್ಲಿ ಯುವ ವಾಹಿನಿ ಸಂಚಲನ ಸಮಿತಿ ಮುಂಡಾಜೆ ಇದರ ಗೌರವ ಅಧ್ಯಕ್ಷರಾಗಿರುವ ಬಾಬು ಪೂಜಾರಿ ಕೂಳೂರು ಉಪಸ್ಥಿತರಿದ್ದರು. ಕೇಶವ ಮುಂಡಾಜೆ ಇವರು ಅಧ್ಯಕ್ಷೀಯ ನುಡಿಗಳನ್ನಾಡಿದರು.
ನಿಶ್ಮಿತಾರವರು ಕಾರ್ಯಕ್ರಮಕ್ಕೆ ಬಂದಿರುವಂತಹ ಅತಿಥಿಗಳನ್ನು ಸ್ವಾಗತಿಸಿದರು. ವಿತೇಶ್ ಕೋಟ್ಯಾನ್ ಧನ್ಯವಾದವಿತ್ತರು. ಜಿತೀಕ್ಷಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!