23.3 C
ಪುತ್ತೂರು, ಬೆಳ್ತಂಗಡಿ
April 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ ವಾರ್ಷಿಕ ಮಹಾಸಭೆಯು ಫೆ.23ರಂದು ಎಚ್ ಎಮ್ ಮದರಸಹಾಲ್ ಜಾರಿಗೆ ಬೈಲ್ ನಲ್ಲಿ ನಡೆಸಲಾಯಿತು.

ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯರ್ ಮಾಚಾರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಮುದರಿಸ್ ಯಾಸೀನ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಎಸ್ ವೈ ಎಸ್ ರಾಜ್ಯ ನಾಯಕರಾದ ಕೆವೈ ಹಂಝ ಮದನಿ ಅಲ್ ಫುರ್ಖಾನಿ ಗುರುವಾಯನಕೆರೆ ದುಃಆ ಆಶೀರ್ವಚನ ಮಾಡಿದರು. ಎಸ್ ವೈ ಎಸ್ ಝೋನ್ ಕಾರ್ಯದರ್ಶಿ ನಝೀರ್ ಪೆರ್ದಾಡಿ ವರದಿ ವಾಚಿಸಿದರು ಕಳೆದ ಎರಡು ವರ್ಷದ ಅವಧಿಯ ಲೆಕ್ಕ ಪತ್ರ ಕೋಶಾಧಿಕಾರಿ ಹಾರಿಸ್ ಕುಕ್ಕುಡಿ ಮಂಡಿಸಿದರು. ಜಿಲ್ಲೆಯಿಂದ ಆಗಮಿಸಿದ ನಾಯಕರಗಳಾದ ಶಾಫಿ ಸಖಾಫಿ ಕೊಕ್ಕಡ ತರಗತಿ ಮಂಡಿಸಿ, ಕಲಂದರ್ ಪದ್ಮಂಜ ರವರು ನೂತನ ಸಮಿತಿ ರಚನೆಗೆ ನೇತೃತ್ವ ನೀಡಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಬಿಎಂ ಸಾಧಿಕ್ ಮಾಸ್ಟರ್ ಮಲೆಬೆಟ್ಟು ಆಶಂಶ ಮಾತುಗಳನ್ನಾಡಿದರು.

ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ 2025 26ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಖಾಫಿ ಆಲಂದಿಲ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು, ದಅವಾ ಮತ್ತು ಟ್ರೈನಿಂಗ್ ಉಪಾಧ್ಯಕ್ಷರಾಗಿ ಅಯ್ಯೂಬ್ ಮಹ್ಳರೀ ಕಾವಳಕಟ್ಟೆ, ಕಾರ್ಯದರ್ಶಿಯಾಗಿ ಆಶ್ರಫ್ ಮುಂಡಾಜೆ, ಸೋಶಿಯಲ್ ಮತ್ತು ಕಲ್ಚರಲ್ ಕಾರ್ಯದರ್ಶಿಯಾಗಿ ಸಿದ್ದೀಕ್ ಪರಪ್ಪು, ಸಾಂತ್ವನ ಮತ್ತು ಇಸಾಬ ಉಪಾಧ್ಯಕ್ಷರಾಗಿ ಕೆ ವೈ ಇಸ್ಮಾಯಿಲ್ ವೇಣೂರು, ಕಾರ್ಯದರ್ಶಿಯಾಗಿ ಅಝೀಝ್ ಕಾಜೂರು, ಸಂಘಟನಾ ಉಪಾಧ್ಯಕ್ಷರಾಗಿ ಜಮಾಲುದ್ದೀನ್ ಲತೀಫಿ ಲಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎಚ್ ಉಜಿರೆ,ಮೀಡಿಯಾ ಮತ್ತು ಐಟಿ ಕಾರ್ಯದರ್ಶಿಯಾಗಿ ಹಾರಿಸ್ ಕುಕ್ಕುಡಿ ಇವರುಗಳನ್ನು ನೇಮಕ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಏಳು ಸರ್ಕಲ್ ಸಮಿತಿಯ ಕೌನ್ಸಿಲರ್ ಗಳು ಭಾಗವಹಿಸಿದ್ದರು ಮಹಾಸಭೆಗೆ ಹಾಜರಾದ ಸರ್ವರಿಗೂ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ವಂದಿಸಿದರು.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya
error: Content is protected !!