22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ ವಾರ್ಷಿಕ ಮಹಾಸಭೆಯು ಫೆ.23ರಂದು ಎಚ್ ಎಮ್ ಮದರಸಹಾಲ್ ಜಾರಿಗೆ ಬೈಲ್ ನಲ್ಲಿ ನಡೆಸಲಾಯಿತು.

ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯರ್ ಮಾಚಾರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಮುದರಿಸ್ ಯಾಸೀನ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಎಸ್ ವೈ ಎಸ್ ರಾಜ್ಯ ನಾಯಕರಾದ ಕೆವೈ ಹಂಝ ಮದನಿ ಅಲ್ ಫುರ್ಖಾನಿ ಗುರುವಾಯನಕೆರೆ ದುಃಆ ಆಶೀರ್ವಚನ ಮಾಡಿದರು. ಎಸ್ ವೈ ಎಸ್ ಝೋನ್ ಕಾರ್ಯದರ್ಶಿ ನಝೀರ್ ಪೆರ್ದಾಡಿ ವರದಿ ವಾಚಿಸಿದರು ಕಳೆದ ಎರಡು ವರ್ಷದ ಅವಧಿಯ ಲೆಕ್ಕ ಪತ್ರ ಕೋಶಾಧಿಕಾರಿ ಹಾರಿಸ್ ಕುಕ್ಕುಡಿ ಮಂಡಿಸಿದರು. ಜಿಲ್ಲೆಯಿಂದ ಆಗಮಿಸಿದ ನಾಯಕರಗಳಾದ ಶಾಫಿ ಸಖಾಫಿ ಕೊಕ್ಕಡ ತರಗತಿ ಮಂಡಿಸಿ, ಕಲಂದರ್ ಪದ್ಮಂಜ ರವರು ನೂತನ ಸಮಿತಿ ರಚನೆಗೆ ನೇತೃತ್ವ ನೀಡಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಬಿಎಂ ಸಾಧಿಕ್ ಮಾಸ್ಟರ್ ಮಲೆಬೆಟ್ಟು ಆಶಂಶ ಮಾತುಗಳನ್ನಾಡಿದರು.

ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ 2025 26ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಖಾಫಿ ಆಲಂದಿಲ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು, ದಅವಾ ಮತ್ತು ಟ್ರೈನಿಂಗ್ ಉಪಾಧ್ಯಕ್ಷರಾಗಿ ಅಯ್ಯೂಬ್ ಮಹ್ಳರೀ ಕಾವಳಕಟ್ಟೆ, ಕಾರ್ಯದರ್ಶಿಯಾಗಿ ಆಶ್ರಫ್ ಮುಂಡಾಜೆ, ಸೋಶಿಯಲ್ ಮತ್ತು ಕಲ್ಚರಲ್ ಕಾರ್ಯದರ್ಶಿಯಾಗಿ ಸಿದ್ದೀಕ್ ಪರಪ್ಪು, ಸಾಂತ್ವನ ಮತ್ತು ಇಸಾಬ ಉಪಾಧ್ಯಕ್ಷರಾಗಿ ಕೆ ವೈ ಇಸ್ಮಾಯಿಲ್ ವೇಣೂರು, ಕಾರ್ಯದರ್ಶಿಯಾಗಿ ಅಝೀಝ್ ಕಾಜೂರು, ಸಂಘಟನಾ ಉಪಾಧ್ಯಕ್ಷರಾಗಿ ಜಮಾಲುದ್ದೀನ್ ಲತೀಫಿ ಲಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎಚ್ ಉಜಿರೆ,ಮೀಡಿಯಾ ಮತ್ತು ಐಟಿ ಕಾರ್ಯದರ್ಶಿಯಾಗಿ ಹಾರಿಸ್ ಕುಕ್ಕುಡಿ ಇವರುಗಳನ್ನು ನೇಮಕ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಏಳು ಸರ್ಕಲ್ ಸಮಿತಿಯ ಕೌನ್ಸಿಲರ್ ಗಳು ಭಾಗವಹಿಸಿದ್ದರು ಮಹಾಸಭೆಗೆ ಹಾಜರಾದ ಸರ್ವರಿಗೂ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ವಂದಿಸಿದರು.

Related posts

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!