23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!