September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya
error: Content is protected !!