April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

ಕಳೆಂಜ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಫೆ.24 ರಂದು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ವಿಶ್ವನಾಥ ಹೆಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

2024 – 25ನೇ ಸಾಲಿನ ವಿಶೇಷಚೇತನರ ಕುರಿತಾದ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶ್ರೀಮತಿ ವಿಮಲಾ ಎನ್ ವಾಚಿಸಿದರು.


ಸಭೆಯಲ್ಲಿ ಬೆಳ್ತಂಗಡಿ ತಾಲ್ಲೂಕು ವಿಶೇಷಚೇತನರ ವಿವಿಧೋದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರು ಉಪಸ್ಥಿತರಿದ್ದು ವಿಶೇಷಚೇತನರಿಗೆ ಸರಕಾರದಿಂದ ಹಾಗೂ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.


ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ ಇವರ ಸಹಯೋಗದಲ್ಲಿ ವಿಶೇಷಚೇತನರಿಗೆ ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 60 ಮಂದಿ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
ಸಭೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಎಂ ಬಿ ಕೆ, ವಿಶೇಷಚೇತನರು ಮತ್ತು ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ನಿರೂಪಿಸಿ, ಸ್ವಾಗತಿಸಿದರು. ವಿ ಆರ್ ಡಬ್ಲ್ಯೂ ಶ್ರೀಮತಿ ವಿಮಲಾ ಎನ್ ಧನ್ಯವಾದವಿತ್ತರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!