23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಶಾಲಾ ಎಸ್ ಡಿ ಎಂ ಸಿ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಶಾಲಾ ವಿದ್ಯಾರ್ಥಿಗಳ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ ಜರುಗಿತು.


ಎ ಜೆ ಆಸ್ಪತ್ರೆಯ ವೈದ್ಯರಾದ ಡಾ ಶಿಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮರ್ ಫಾರೂಕ್, ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಹಾಜಿ ಲತೀಫ್, ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮುಸ್ತಫಾ, ಪಡಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಐಶ್ವರ್ಯ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಶಿವಾನಿ ಹಾಗೂ ಶಾಲಾ ಆರೋಗ್ಯ ಮಂತ್ರಿ ಮುಫೀದಾ ಬಾನು ಉಪಸ್ಥಿತರಿದ್ದರು.

102 ವಿದ್ಯಾರ್ಥಿಗಳು 5 ಮಂದಿ ಎಸ್ ಡಿ ಎಂ ಸಿ ಸದಸ್ಯರು ಚಿಕಿತ್ಸೆ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya
error: Content is protected !!