25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಶಾಲಾ ಎಸ್ ಡಿ ಎಂ ಸಿ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಶಾಲಾ ವಿದ್ಯಾರ್ಥಿಗಳ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ ಜರುಗಿತು.


ಎ ಜೆ ಆಸ್ಪತ್ರೆಯ ವೈದ್ಯರಾದ ಡಾ ಶಿಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮರ್ ಫಾರೂಕ್, ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಹಾಜಿ ಲತೀಫ್, ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮುಸ್ತಫಾ, ಪಡಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಐಶ್ವರ್ಯ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಶಿವಾನಿ ಹಾಗೂ ಶಾಲಾ ಆರೋಗ್ಯ ಮಂತ್ರಿ ಮುಫೀದಾ ಬಾನು ಉಪಸ್ಥಿತರಿದ್ದರು.

102 ವಿದ್ಯಾರ್ಥಿಗಳು 5 ಮಂದಿ ಎಸ್ ಡಿ ಎಂ ಸಿ ಸದಸ್ಯರು ಚಿಕಿತ್ಸೆ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya
error: Content is protected !!