30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ನಡ ಗ್ರಾಮ ಪಂಚಾಯತ್ 2024-25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯು ಫೆ. 18 ರಂದು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಹಾಗೂ 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಶಬೀನಾ ಬಾನು ಇವರಿಗೆ ಆರೋಗ್ಯ ಸಮಸ್ಯೆ ಇದ್ದಕಾರಣ ಪಂಚಾಯತ್ ನ ನರೇಗಾ ಸಿಬ್ಬಂದಿಯಾದ ಮೀನಾಕ್ಷಿ ಇವರು ವಾಚಿಸಿದರು.


ವಿಕಲಚೇತನರಿಗೆ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ಮಾಹಿತಿ ಸಂಪನ್ಮೂಲ ವ್ಯಕ್ತಿಯಾಗಿ ಇಂದಬೆಟ್ಟು ಗ್ರಾಮದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಾದ ಜೋಸೆಫ್ ಇವರು ನೀಡಿದರು.ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮತ್ತು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ವೇದಿಕೆಯಲ್ಲಿರುವ ಗಣ್ಯರಿಂದ ಹಸ್ತಂತರಿಸಲಾಯಿತು. ವಿಶೇಷಚೇತನರು ಸಮಾಜವನ್ನು ಹೇಗೆ ಎದುರಿಸಬೇಕು ಎಂಬ ಮಾಹಿತಿಯನ್ನು ನಗರ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಫೌಝಿಯಾ ಇವರು ಸವಿವಾರವಾಗಿ ತಿಳಿಸಿದರು ಹಾಗೂ ತಾಲೂಕಿನ ಆರೋಗ್ಯ ನಿರೀಕ್ಷಿಣಾಧಿಕಾರಿಯಾದ ರಕ್ಷಿತ್ ಎಂಡೋಸಲ್ಫಾನ್ ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಎಂಡೋ ಫಲಾನುಭವಿಗಳಿಗೆ ಬಂದಂತಹ ಎಂಡೋ ಕಾರ್ಡ್ ನ್ನು ವಿತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಮತ್ತು ಆಶಾ ಕಾರ್ಯಕರ್ತರು ಸೇರಿ ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು. ಪಂಚಾಯತ್ ನ ಅಧ್ಯಕ್ಷರು ವಿಶೇಷಚೇತನರಿಗೆ ಹಿತನುಡಿಯನ್ನು ತಿಳಿಸಿದರು. ಸಭೆಯನ್ನು ಪಂಚಾಯತ್ ನ ನರೇಗಾ ಸಿಬ್ಬಂದಿ ಯಾದ ಮೀನಾಕ್ಷಿ ನಿರೂಪಿಸಿ, ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿಯಾದ ದಿವಾಕರ ಧನ್ಯವಾದ ಸಲ್ಲಿಸಿದರು. ಸಭೆಯಲ್ಲಿ ಆಶಾ ಕಾರ್ಯಕರ್ತರು, ಸಂಜೀವಿನಿ ಸಂಘದ ಎಮ್ ಬಿ ಕೆ ಯವರು, ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya
error: Content is protected !!