23.8 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ ಸೌಹಾರ್ದ ಸಹಕಾರಿ ಸಂಘದ ಅಭ್ಯರ್ಥಿ ಧರ್ಮರಾಜ್ ಗೌಡ ಅಡ್ಕಡಿ ಜಯಗಳಿಸಿದ್ದು ಚುನಾವಣೆ ಫಲಿತಾಂಶ ಕೋರ್ಟ್ ನಲ್ಲಿ ಇದ್ದ ಕಾರಣ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ಇದೀಗ ಫಲಿತಾಂಶವನ್ನು ಕೋರ್ಟ್ ಪ್ರಕಟಿಸಿದ್ದು ಫೆ.25ರಂದು ನಡೆದ ಸಹಕಾರಿ ಭಾರತಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ. ಸಾಲಿಯಾನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ಕಾರ್ಯನಿರ್ವಹಿಸಿದರು.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
error: Content is protected !!