July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ ಸೌಹಾರ್ದ ಸಹಕಾರಿ ಸಂಘದ ಅಭ್ಯರ್ಥಿ ಧರ್ಮರಾಜ್ ಗೌಡ ಅಡ್ಕಡಿ ಜಯಗಳಿಸಿದ್ದು ಚುನಾವಣೆ ಫಲಿತಾಂಶ ಕೋರ್ಟ್ ನಲ್ಲಿ ಇದ್ದ ಕಾರಣ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ಇದೀಗ ಫಲಿತಾಂಶವನ್ನು ಕೋರ್ಟ್ ಪ್ರಕಟಿಸಿದ್ದು ಫೆ.25ರಂದು ನಡೆದ ಸಹಕಾರಿ ಭಾರತಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ. ಸಾಲಿಯಾನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ಕಾರ್ಯನಿರ್ವಹಿಸಿದರು.

Related posts

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!