September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ ಸೌಹಾರ್ದ ಸಹಕಾರಿ ಸಂಘದ ಅಭ್ಯರ್ಥಿ ಧರ್ಮರಾಜ್ ಗೌಡ ಅಡ್ಕಡಿ ಜಯಗಳಿಸಿದ್ದು ಚುನಾವಣೆ ಫಲಿತಾಂಶ ಕೋರ್ಟ್ ನಲ್ಲಿ ಇದ್ದ ಕಾರಣ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ಇದೀಗ ಫಲಿತಾಂಶವನ್ನು ಕೋರ್ಟ್ ಪ್ರಕಟಿಸಿದ್ದು ಫೆ.25ರಂದು ನಡೆದ ಸಹಕಾರಿ ಭಾರತಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ. ಸಾಲಿಯಾನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ಕಾರ್ಯನಿರ್ವಹಿಸಿದರು.

Related posts

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya
error: Content is protected !!