22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಇದೀಗ ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ.

ಚುನಾಯಿತರಾದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಜಯ ಗಳಿಸಿದ್ದಾರೆ.

Related posts

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!