25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಫೆಬ್ರವರಿ 28 ರಂದು ಸಮರ್ಪಣೆ ಯಾಗಲಿರುವ ಹೊರೆ ಕಾಣಿಕೆಯ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯನ್ನು ಫೆ.26 ರಂದು ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ಸಮಾಲೋಚನಾ ಸಭೆಯಲ್ಲಿ ಫೆ. 28 ರ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರ ಕಾಣಿಕೆಯನ್ನು ಬೆಳ್ತಂಗಡಿ ತಾಲೂಕಿನ ಏಳು ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ನಗರ ವ್ಯಾಪ್ತಿಯಿಂದ ಹೊರ ಕಾಣಿಕೆಯನ್ನು ಸಮರ್ಪಿಸುವ ಬಗ್ಗೆ ಚರ್ಚಿಸಲಾಯಿತು. ಪ್ರತಿ ಕ್ಷೇತ್ರದಿಂದ ಎರಡು ವಾಹನದಲ್ಲಿ ಹೊರೆ ಕಾಣಿಕೆಯೊಂದಿಗೆ ಹೊರಟು ಪುತ್ತೂರಿನಲ್ಲಿ ಒಂದು ಗಂಟೆಗೆ ಸೇರಿ ಅಲ್ಲಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭವ್ಯ ಮೆರವಣಿಗೆಯೊಂದಿಗೆ ತೆರಳುವುದೆಂದು ನಿರ್ಧರಿಸಲಾಯಿತು.


ಸಮಾಲೋಚನಾ ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ನಿಕಟಪೂರ್ವ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಬಿ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಜಯಂತ ಕೋಟ್ಯಾನ್ ಮರೋಡಿ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷರಾಗಿರುವ ಜಯರಾಮ ಬಂಗೇರ ಹೆರಾಜೆ, ಬೆಳ್ತಂಗಡಿ ನಗರ ಸಂಚಾಲಕ ಕರುಣಾಕರ, ಲಾಯಿಲ ವಲಯ ಸಂಚಾಲಕಿ ಸೌಮ್ಯ, ಕುವೆಟ್ಟು ವಲಯ ಸಂಚಾಲಕಿ ಶಾಂತ ಕುವೆಟ್ಟು, ಪ್ರಮೋದ್ ಮಚ್ಚಿನ, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಮಾಜಿ ಸದಸ್ಯ ಮಂಜುನಾಥ್ ಸಾಲಿಯನ್ ,ಕಣಿಯೂರು ವಲಯ ಸಂಚಾಲಕ ಉಷಾ ಶರತ್, ಅಳದಂಗಡಿ ವಲಯ ಸಂಚಾಲಕ ಮಧುರ ರಾಘವ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು ಇದರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಪ್ರಶಾಂತ್ ಪಾರೆಂಕಿ, ನಾರಾವಿ ವಲಯ ಸಂಚಾಲಕ ಯಶೋಧರ ಮರೋಡಿ, ಸುಲ್ಕೇರಿ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಶುಭಕರ ಕುದ್ಯಾಡಿ, ಮಾಲಾಡಿ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ದಿನೇಶ್ ಡಿ ಕರ್ಕೇರ, ಗುರುನಾರಾಯಣ ಸೇವಾ ಸಂಘ ಮಡಂತ್ಯಾರ್ ಇಲ್ಲಿನ ಅಧ್ಯಕ್ಷ ವೆಂಕಪ್ಪ ಕೋಡ್ಲಕ್ಕೆ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಹರಿದಾಸ್ ಕೇದೆ ಮುಂತಾದವರು ಭಾಗವಹಿಸಿದ್ದರು.


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಕಾರ್ಯಕ್ರಮವನ್ನು ಸಂಘಟಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಅಳದಂಗಡಿ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಧನ್ಯವಾದವಿತ್ತರು.

Related posts

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya
error: Content is protected !!