30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!