22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಜ್ಞಾನವು ಹಣಕಾಸನ್ನು ಹೇಗೆ ನಿರ್ವಹಿಸುವುದು ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಉತ್ತಮ ಹಣಕಾಸಿನ ಹೂಡಿಕೆಯ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುವುದರ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ “ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಗಾರವು ಫೆ.25 ರಂದು ನಡೆಯಿತು.


ಈ ಕಾರ್ಯಗಾರವು ಎರಡು ಹಂತದಲ್ಲಿ ನಡೆಯಿತು. ಮೊದಲ ಹಂತದಲ್ಲಿ ಷೇರು ಮಾರುಕಟ್ಟೆ ಎಂದರೇನು ಮತ್ತು ಬಿಎಸ್‌ಇ ಮತ್ತು ಎನ್‌ಎಸ್‌ಇ ನ ಇತಿಹಾಸ, ಮೂಲಭೂತ ವಿಶ್ಲೇಷಣೆ ಮತ್ತು ತಾಂತ್ರಿಕ ವಿಶ್ಲೇಷಣೆಯನ್ನು ಒಳಗೊಂಡಿತ್ತು.
ಎರಡನೇಯ ಹಂತದಲ್ಲಿ ಪ್ರಾಯೋಗಿಕವಾಗಿ ಷೇರುಗಳನ್ನು ಹೇಗೆ ಖರೀದಿಸುವುದು, ಡಿಮೇಟ್ ಅಕಾಂಟ್, ಆರ್‌ಎಸ್‌ಐ ಮತ್ತು ಇತರ ತಾಂತ್ರಿಕ ಸಾಧನಗಳನ್ನು ಹೇಗೆ ತೆರೆಯುವುದು ಎಂಬುದನ್ನು ಒಳಗೊಂಡಿತ್ತು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.


ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!