September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಜ್ಞಾನವು ಹಣಕಾಸನ್ನು ಹೇಗೆ ನಿರ್ವಹಿಸುವುದು ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಉತ್ತಮ ಹಣಕಾಸಿನ ಹೂಡಿಕೆಯ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುವುದರ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ “ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಗಾರವು ಫೆ.25 ರಂದು ನಡೆಯಿತು.


ಈ ಕಾರ್ಯಗಾರವು ಎರಡು ಹಂತದಲ್ಲಿ ನಡೆಯಿತು. ಮೊದಲ ಹಂತದಲ್ಲಿ ಷೇರು ಮಾರುಕಟ್ಟೆ ಎಂದರೇನು ಮತ್ತು ಬಿಎಸ್‌ಇ ಮತ್ತು ಎನ್‌ಎಸ್‌ಇ ನ ಇತಿಹಾಸ, ಮೂಲಭೂತ ವಿಶ್ಲೇಷಣೆ ಮತ್ತು ತಾಂತ್ರಿಕ ವಿಶ್ಲೇಷಣೆಯನ್ನು ಒಳಗೊಂಡಿತ್ತು.
ಎರಡನೇಯ ಹಂತದಲ್ಲಿ ಪ್ರಾಯೋಗಿಕವಾಗಿ ಷೇರುಗಳನ್ನು ಹೇಗೆ ಖರೀದಿಸುವುದು, ಡಿಮೇಟ್ ಅಕಾಂಟ್, ಆರ್‌ಎಸ್‌ಐ ಮತ್ತು ಇತರ ತಾಂತ್ರಿಕ ಸಾಧನಗಳನ್ನು ಹೇಗೆ ತೆರೆಯುವುದು ಎಂಬುದನ್ನು ಒಳಗೊಂಡಿತ್ತು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.


ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

Suddi Udaya
error: Content is protected !!