24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಜ್ಞಾನವು ಹಣಕಾಸನ್ನು ಹೇಗೆ ನಿರ್ವಹಿಸುವುದು ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಉತ್ತಮ ಹಣಕಾಸಿನ ಹೂಡಿಕೆಯ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುವುದರ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ “ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಗಾರವು ಫೆ.25 ರಂದು ನಡೆಯಿತು.


ಈ ಕಾರ್ಯಗಾರವು ಎರಡು ಹಂತದಲ್ಲಿ ನಡೆಯಿತು. ಮೊದಲ ಹಂತದಲ್ಲಿ ಷೇರು ಮಾರುಕಟ್ಟೆ ಎಂದರೇನು ಮತ್ತು ಬಿಎಸ್‌ಇ ಮತ್ತು ಎನ್‌ಎಸ್‌ಇ ನ ಇತಿಹಾಸ, ಮೂಲಭೂತ ವಿಶ್ಲೇಷಣೆ ಮತ್ತು ತಾಂತ್ರಿಕ ವಿಶ್ಲೇಷಣೆಯನ್ನು ಒಳಗೊಂಡಿತ್ತು.
ಎರಡನೇಯ ಹಂತದಲ್ಲಿ ಪ್ರಾಯೋಗಿಕವಾಗಿ ಷೇರುಗಳನ್ನು ಹೇಗೆ ಖರೀದಿಸುವುದು, ಡಿಮೇಟ್ ಅಕಾಂಟ್, ಆರ್‌ಎಸ್‌ಐ ಮತ್ತು ಇತರ ತಾಂತ್ರಿಕ ಸಾಧನಗಳನ್ನು ಹೇಗೆ ತೆರೆಯುವುದು ಎಂಬುದನ್ನು ಒಳಗೊಂಡಿತ್ತು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.


ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya
error: Content is protected !!