25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಉಮಾಮಹೇಶ್ವರ ದೇವರ ಜಾತ್ರಾ ಮಹೋತ್ಸವವು ಫೆ.25 ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಆಶ್ರಯದಲ್ಲಿ 47ನೇ ವರ್ಷದ ಮಹಾಶಿವರಾತ್ರಿಯ ಅರ್ಧ ಏಕಾಹ ಭಜನೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆಯು ಫೆ.26ರಂದು ನಡೆಯಿತು.


ಫೆ.25ರಂದು ಬೆಳಿಗ್ಗೆ ಗಣಹವನ, ನವಕ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಉಪಹಾರ, ಜನಾರ್ದನ ಬೆಂಗಳೂರು ಇವರಿಂದ ಶಾಸ್ತ್ರಿಯ ಸಂಗೀತ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ತಾಯಾಂಬಿಕ, ರಾತ್ರಿ ರಂಗಪೂಜೆ, ಶ್ರೀದೇವರ ಭೂತ ಬಲಿ ಉತ್ಸವ, ಕಟ್ಟೆಪೂಜೆ, ಬೆಡಿಸೇವೆ, ನೃತ್ಯೋತ್ಸವ, ಅನ್ನಸಂತರ್ಪಣೆ, ವೈಷ್ಣವಿ ಶಿಶು ಮಂದಿರದ ಮತ್ತು ಬಾಲಗೋಕುಲ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಫೆ.26ರಂದು ಬೆಳಿಗ್ಗೆ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ವಿತರಣೆ, ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ ಮೊಕ್ತೇಸರರು ನೋಣಯ್ಯ ಗೌಡ ಎಲಿಮಾರು, ಅಧ್ಯಕ್ಷ ಆನಂದ ಗೌಡ ಮರಕ್ಕಡ , ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಕೋಶಾಧಿಕಾರಿ ಶಿವಪ್ಪ ಗೌಡ ನೆಲ್ಲಿಕಟ್ಟೆ
ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಸಂಜೆ ಸತ್ಯನಾರಾಯಣ ಪೂಜೆ ಆರಂಭ, ಮಹಾಪೂಜೆ, ಜ್ಯೋತಿ ಬೆಳಗಿಸುವುದು, ಭಕ್ತಾದಿಗಳಿಂದ ಭಜನಾರಂಭ, ರಾತ್ರಿ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ರಂಗಪೂಜೆ, ಉಪಹಾರ ನಡೆಯಲಿರುವುದು.
ಫೆ.27ರಂದು ಪ್ರಾತಃಕಾಲ ಏಕಾದಶ ರುದ್ರಾಭಿಷೇಕ, ಬೆಳಿಗ್ಗೆ ಮಹಾಮಂಗಳಾರತಿ, ನಡೆಯಲಿದೆ.

ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya
error: Content is protected !!