23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

ಧರ್ಮಸ್ಥಳ: ಶಿವರಾತ್ರಿಯ ಪರಮ ಪವಿತ್ರವಾದ ದಿನದಂದು ಶಿವನ ಜಾಗರಣೆ ಮಾಡುವುದು ವಿಶೇಷ. ಸಮುದ್ರಮಥನವಾದಾಗ ಒಳ್ಳೆಯ ವಸ್ತುಗಳು ಬಂದಾಗ ಎಲ್ಲರೂ ಸ್ವೀಕರಿಸಲು ಮುಂದಿದ್ದರು. ಆದರೆ ವಿಷ ಬಂದಾಗ ಶಿವ ವಿಷವನ್ನು ಪಾನ ಮಾಡಿ ಲೋಕವನ್ನು ಕಾಪಾಡುತ್ತಾನೆ. ಇದಕ್ಕಾಗಿ ಶಿವನನ್ನು ಬಹಳ ‘ಭಕ್ತಿಯಿಂದ ಆರಾಧಿಸುತ್ತಾರೆ ಎಂದು ‘ಧರ್ಮಸ್ಥಳ ‘ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ನುಡಿದರು.


ಬೆಂಗಳೂರಿನ ಸದಾಶಿವನಗರದ ಉದ್ಯಮಿ ದಿನೇಶ್ ಹಾಗೂ ಸುನಿತಾ ದಂಪತಿಯು ಕೊಡಮಾಡಿದ ಬೃಹದಾಕಾರದ ಘಂಟೆಯನ್ನು ಧರ್ಮಸ್ಥಳ ಅಣ್ಣಪ್ಪ ಬೆಟ್ಟದ ಮುಂಭಾಗ ಸ್ಥಾಪಿಸಿರುವುದನ್ನು ಫೆ.26 ರಂದು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಜೀವನದಲ್ಲಿ ಸುಖವಿದ್ದಾಗ ಎಲ್ಲರೂ ತಾಮುಂದು ನಾಮುಂದು ಎಂದು ನಮ್ಮೊಂದಿಗಿರುತ್ತಾರೆ. ಆದರೆ ಕಷ್ಟ ಬಂದಾಗ ಯಾರೂ ಇರುವುದಿಲ್ಲ. ಶಿವ ಜನರ ದುಃಖ, ಕಷ್ಟಗಳನ್ನು ಸ್ವೀಕರಿಸಿ ಕಾಪಾಡಿದಾತ. ಹಾಗಾಗಿ ಶಿವರಾತ್ರಿಯಂದು ನಮ್ಮ ಕಷ್ಟಗಳನ್ನೆಲ್ಲ ನೀನು ಸ್ವೀಕರಿಸಿ ಸುಖವನ್ನು ಕೊಡು ಎಂದು ಪಾದಯಾತ್ರೆಯಲ್ಲಿ ಬರುತ್ತಾರೆ. ಅವರಿಗೆಲ್ಲ ಶಿವ ಆಶೀರ್ವದಿಸುತ್ತಾನೆ ಎಂದ ಅವರು ಬೆಂಗಳೂರಿನ ಉದ್ಯಮಿ ದಿನೇಶ್ ಅವರ ಇಚ್ಛೆಯಂತೆ ಕ್ಷೇತ್ರಕ್ಕೆ ಶಿವರಾತ್ರಿಯಂದು ವಿಶೇಷ ಕೊಡುಗೆ ನೀಡಿದ್ದಾರೆ. ಅವರನ್ನು ದೇವರು ಹರಸಲಿ ಎಂದು ಆಶೀರ್ವದಿಸಿದರು.


ಘಂಟೆ ಕೊಡುಗೆ ನೀಡಿದ ಬೆಂಗಳೂರು ಸದಾಶಿವನಗರದ ಉದ್ಯಮಿ ದಿನೇಶ್ ಮಾತನಾಡಿ, ಸಣ್ಣ ವಯಸ್ಸಿನಿಂದ ನಾನು ಧರ್ಮಸ್ಥಳಕ್ಕೆ ಬರುತ್ತಿದ್ದೆ. ಧರ್ಮಸ್ಥಳಕ್ಕೆ ಏನಾದರು ಕೊಡುಗೆ ನೀಡಬೇಕೆಂಬ ನೆಲೆಯಲ್ಲಿ ಘಂಟೆ ಕೊಡುಗೆ ನೀಡಿದ್ದೇನೆ. ಎಲ್ಲ ಜನತೆಗೆ ಒಳ್ಳೆದಾಗಲಿ ಎಂಬ ನೆಲೆಯಲ್ಲಿ ಕೊಡುಗೆ ನೀಡಿದ್ದೇನೆ. ಶಿವರಾತ್ರಿಯಂದು ಉದ್ಘಾಟನೆಯಾಗಿರುವುದು ಬಹಳ ಸಂತೋಷ ನೀಡಿದೆ ಎಂದರು.

ಉದ್ಯಮಿ ಆಪ್ತರಾದ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನಿತಾ, ‘ಧರ್ಮಸ್ಥಳದ ಎ.ವೀರು ಶೆಟ್ಟಿ ಸಹಿತ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Related posts

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!