25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

ಧರ್ಮಸ್ಥಳ: ಶಿವರಾತ್ರಿಯ ಪರಮ ಪವಿತ್ರವಾದ ದಿನದಂದು ಶಿವನ ಜಾಗರಣೆ ಮಾಡುವುದು ವಿಶೇಷ. ಸಮುದ್ರಮಥನವಾದಾಗ ಒಳ್ಳೆಯ ವಸ್ತುಗಳು ಬಂದಾಗ ಎಲ್ಲರೂ ಸ್ವೀಕರಿಸಲು ಮುಂದಿದ್ದರು. ಆದರೆ ವಿಷ ಬಂದಾಗ ಶಿವ ವಿಷವನ್ನು ಪಾನ ಮಾಡಿ ಲೋಕವನ್ನು ಕಾಪಾಡುತ್ತಾನೆ. ಇದಕ್ಕಾಗಿ ಶಿವನನ್ನು ಬಹಳ ‘ಭಕ್ತಿಯಿಂದ ಆರಾಧಿಸುತ್ತಾರೆ ಎಂದು ‘ಧರ್ಮಸ್ಥಳ ‘ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ನುಡಿದರು.


ಬೆಂಗಳೂರಿನ ಸದಾಶಿವನಗರದ ಉದ್ಯಮಿ ದಿನೇಶ್ ಹಾಗೂ ಸುನಿತಾ ದಂಪತಿಯು ಕೊಡಮಾಡಿದ ಬೃಹದಾಕಾರದ ಘಂಟೆಯನ್ನು ಧರ್ಮಸ್ಥಳ ಅಣ್ಣಪ್ಪ ಬೆಟ್ಟದ ಮುಂಭಾಗ ಸ್ಥಾಪಿಸಿರುವುದನ್ನು ಫೆ.26 ರಂದು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಜೀವನದಲ್ಲಿ ಸುಖವಿದ್ದಾಗ ಎಲ್ಲರೂ ತಾಮುಂದು ನಾಮುಂದು ಎಂದು ನಮ್ಮೊಂದಿಗಿರುತ್ತಾರೆ. ಆದರೆ ಕಷ್ಟ ಬಂದಾಗ ಯಾರೂ ಇರುವುದಿಲ್ಲ. ಶಿವ ಜನರ ದುಃಖ, ಕಷ್ಟಗಳನ್ನು ಸ್ವೀಕರಿಸಿ ಕಾಪಾಡಿದಾತ. ಹಾಗಾಗಿ ಶಿವರಾತ್ರಿಯಂದು ನಮ್ಮ ಕಷ್ಟಗಳನ್ನೆಲ್ಲ ನೀನು ಸ್ವೀಕರಿಸಿ ಸುಖವನ್ನು ಕೊಡು ಎಂದು ಪಾದಯಾತ್ರೆಯಲ್ಲಿ ಬರುತ್ತಾರೆ. ಅವರಿಗೆಲ್ಲ ಶಿವ ಆಶೀರ್ವದಿಸುತ್ತಾನೆ ಎಂದ ಅವರು ಬೆಂಗಳೂರಿನ ಉದ್ಯಮಿ ದಿನೇಶ್ ಅವರ ಇಚ್ಛೆಯಂತೆ ಕ್ಷೇತ್ರಕ್ಕೆ ಶಿವರಾತ್ರಿಯಂದು ವಿಶೇಷ ಕೊಡುಗೆ ನೀಡಿದ್ದಾರೆ. ಅವರನ್ನು ದೇವರು ಹರಸಲಿ ಎಂದು ಆಶೀರ್ವದಿಸಿದರು.


ಘಂಟೆ ಕೊಡುಗೆ ನೀಡಿದ ಬೆಂಗಳೂರು ಸದಾಶಿವನಗರದ ಉದ್ಯಮಿ ದಿನೇಶ್ ಮಾತನಾಡಿ, ಸಣ್ಣ ವಯಸ್ಸಿನಿಂದ ನಾನು ಧರ್ಮಸ್ಥಳಕ್ಕೆ ಬರುತ್ತಿದ್ದೆ. ಧರ್ಮಸ್ಥಳಕ್ಕೆ ಏನಾದರು ಕೊಡುಗೆ ನೀಡಬೇಕೆಂಬ ನೆಲೆಯಲ್ಲಿ ಘಂಟೆ ಕೊಡುಗೆ ನೀಡಿದ್ದೇನೆ. ಎಲ್ಲ ಜನತೆಗೆ ಒಳ್ಳೆದಾಗಲಿ ಎಂಬ ನೆಲೆಯಲ್ಲಿ ಕೊಡುಗೆ ನೀಡಿದ್ದೇನೆ. ಶಿವರಾತ್ರಿಯಂದು ಉದ್ಘಾಟನೆಯಾಗಿರುವುದು ಬಹಳ ಸಂತೋಷ ನೀಡಿದೆ ಎಂದರು.

ಉದ್ಯಮಿ ಆಪ್ತರಾದ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನಿತಾ, ‘ಧರ್ಮಸ್ಥಳದ ಎ.ವೀರು ಶೆಟ್ಟಿ ಸಹಿತ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!