22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!