25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!