25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಇದೀಗ ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ.

ಚುನಾಯಿತರಾದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಜಯ ಗಳಿಸಿದ್ದಾರೆ.

Related posts

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!