23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಇದೀಗ ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ.

ಚುನಾಯಿತರಾದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಜಯ ಗಳಿಸಿದ್ದಾರೆ.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya
error: Content is protected !!