September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಇದೀಗ ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ.

ಚುನಾಯಿತರಾದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಜಯ ಗಳಿಸಿದ್ದಾರೆ.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’: ತುಳುನಾಡಿನ ಸಂಸ್ಕೃತಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ: ಅನಿಲ್ ಕುಮಾರ್:

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!