July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಫೆಬ್ರವರಿ 28 ರಂದು ಸಮರ್ಪಣೆ ಯಾಗಲಿರುವ ಹೊರೆ ಕಾಣಿಕೆಯ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯನ್ನು ಫೆ.26 ರಂದು ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ಸಮಾಲೋಚನಾ ಸಭೆಯಲ್ಲಿ ಫೆ. 28 ರ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರ ಕಾಣಿಕೆಯನ್ನು ಬೆಳ್ತಂಗಡಿ ತಾಲೂಕಿನ ಏಳು ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ನಗರ ವ್ಯಾಪ್ತಿಯಿಂದ ಹೊರ ಕಾಣಿಕೆಯನ್ನು ಸಮರ್ಪಿಸುವ ಬಗ್ಗೆ ಚರ್ಚಿಸಲಾಯಿತು. ಪ್ರತಿ ಕ್ಷೇತ್ರದಿಂದ ಎರಡು ವಾಹನದಲ್ಲಿ ಹೊರೆ ಕಾಣಿಕೆಯೊಂದಿಗೆ ಹೊರಟು ಪುತ್ತೂರಿನಲ್ಲಿ ಒಂದು ಗಂಟೆಗೆ ಸೇರಿ ಅಲ್ಲಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭವ್ಯ ಮೆರವಣಿಗೆಯೊಂದಿಗೆ ತೆರಳುವುದೆಂದು ನಿರ್ಧರಿಸಲಾಯಿತು.


ಸಮಾಲೋಚನಾ ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ನಿಕಟಪೂರ್ವ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಬಿ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಜಯಂತ ಕೋಟ್ಯಾನ್ ಮರೋಡಿ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷರಾಗಿರುವ ಜಯರಾಮ ಬಂಗೇರ ಹೆರಾಜೆ, ಬೆಳ್ತಂಗಡಿ ನಗರ ಸಂಚಾಲಕ ಕರುಣಾಕರ, ಲಾಯಿಲ ವಲಯ ಸಂಚಾಲಕಿ ಸೌಮ್ಯ, ಕುವೆಟ್ಟು ವಲಯ ಸಂಚಾಲಕಿ ಶಾಂತ ಕುವೆಟ್ಟು, ಪ್ರಮೋದ್ ಮಚ್ಚಿನ, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಮಾಜಿ ಸದಸ್ಯ ಮಂಜುನಾಥ್ ಸಾಲಿಯನ್ ,ಕಣಿಯೂರು ವಲಯ ಸಂಚಾಲಕ ಉಷಾ ಶರತ್, ಅಳದಂಗಡಿ ವಲಯ ಸಂಚಾಲಕ ಮಧುರ ರಾಘವ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು ಇದರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಪ್ರಶಾಂತ್ ಪಾರೆಂಕಿ, ನಾರಾವಿ ವಲಯ ಸಂಚಾಲಕ ಯಶೋಧರ ಮರೋಡಿ, ಸುಲ್ಕೇರಿ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಶುಭಕರ ಕುದ್ಯಾಡಿ, ಮಾಲಾಡಿ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ದಿನೇಶ್ ಡಿ ಕರ್ಕೇರ, ಗುರುನಾರಾಯಣ ಸೇವಾ ಸಂಘ ಮಡಂತ್ಯಾರ್ ಇಲ್ಲಿನ ಅಧ್ಯಕ್ಷ ವೆಂಕಪ್ಪ ಕೋಡ್ಲಕ್ಕೆ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಹರಿದಾಸ್ ಕೇದೆ ಮುಂತಾದವರು ಭಾಗವಹಿಸಿದ್ದರು.


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಕಾರ್ಯಕ್ರಮವನ್ನು ಸಂಘಟಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಅಳದಂಗಡಿ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಧನ್ಯವಾದವಿತ್ತರು.

Related posts

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!