July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಕೆಪಿಜೆಪಿ ಪಕ್ಷವು ಓರ್ವ ಶಾಸಕ ಮತ್ತು ಸಚಿವರನ್ನು ನೀಡಿದ ಹೆಗ್ಗಳಿಗೆ ಕಾರಣವಾಗಿದೆಯಲ್ಲದೆ, ಇತ್ತೀಚೆಗೆ ರಾಣೇಬೆನ್ನೂರಿನಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಸುಮಾರು ೧೦ ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಹೀಗಾಗಿ ಪಕ್ಷ ಮುಂದಿನ ದಿನಗಳಲ್ಲಿ ಗ್ರಾ.ಪಂ. ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳಲ್ಲಿ ಸ್ಪರ್ಧಿಸುವ ತಯಾರಿ ನಡೆಸುತ್ತಿದೆ ಎಂದು ಕೆಪಿಜೆಪಿ ಪಕ್ಷದ ಸಂಸ್ಥಾಪಕ ಹಾಗೂ ರಾಷ್ಟ್ರೀಯ ಅಧ್ಯಕ್ಷ ಡಾ| ಡಿ. ಮಹೇಶ್ ಗೌಡ ಹೇಳಿದರು.

ಉಜಿರೆಯ ಓಷಿಯನ್ ಪರ್ಲ್‌ನಲ್ಲಿ ಫೆ.25ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ತತ್ವ ಸಿದ್ಧಾಂತ ಧೈರ್ಯ ಧೋರಣೆಗಳನ್ನು ಮೆಚ್ಚಿಕೊಂಡ ಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಉಪೇಂದ್ರರಂತ ದಿಗ್ಗಜರೇ ಸ್ವಯಂಪ್ರೇರಿತರಾಗಿ ಕೆಪಿಜೆಪಿ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸುವ ಮೂಲಕ ಇತರ ರಾಜಕೀಯ ಪಕ್ಷಗಳಿಗೆ ಮಾದರಿಯಾಗಿದೆ ಎಂದರು.

ಧರ್ಮಸ್ಥಳ-ಸುಬ್ರಹ್ಮಣ್ಯ ಪಾದಯಾತ್ರೆ: ಕೆಪಿಜೆಪಿ ಪಕ್ಷದಿಂದ ಕುಂಭಮೇಳ ಯಾತ್ರೆ ಕೈಗೊಂಡು, ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ನಂತರ ಕಾಶಿ, ಅಯೋಧ್ಯೆ ಕ್ಷೇತ್ರಗಳನ್ನು ಸಂದರ್ಶಿಸಿ ಅಲ್ಲಿನ ಸಾನಿಧ್ಯ ಕ್ಷೇತ್ರಗಳ ಪವಿತ್ರ ತೀರ್ಥಗಳೊಂದಿಗೆ ಪಕ್ಷದ ಸುಮಾರು ೨೫೦ಕ್ಕೂ ಅಧಿಕ ಮಂದಿ ಹಾಸನದಿಂದ ಪಾದಯಾತ್ರೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗಂಗಾಜಲ ನೀಡಿದ್ದೇವೆ. ಬಳಿಕ ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಕಾನೂನು ಸಲಹೆಗಾರ್ತಿ ಸುಮಾ, ಪಕ್ಷದ ಪ್ರಮುಖರಾದ ಸವಿತಾ, ಪುಟ್ಟಲಕ್ಷ್ಮೀ, ಶೋಭಾ, ಜಯಚಂದ್ರ ನೆಲಮಂಗಲ ಉಪಸ್ಥಿತರಿದ್ದರು.

Related posts

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!