25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.27 ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು‌. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಮೆಸ್ಕಾಂ ಇಲಾಖೆಯ ಜೆಇ ಸಭೆಗೆ ಬರಬೇಕು. ಅವರ ಬದಲಿಗೆ ಇನ್ನೋಬ್ಬರನ್ನು ಕಳುಹಿಸಿದರೆ ಆಗುವುದಿಲ್ಲ. ನಾವು ಕಳೆದ ಬಾರಿ ತಿಳಿಸಿ ಸಮಸ್ಯೆಗಳನ್ನು ಸರಿಪಡಿಸುವುದಾಗಿ ಹೇಳಿದ್ದರು ಆದರೆ ಇಂದಿನ‌ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಜೆಇ ಸಭೆಗೆ ಹಾಜರಾಗುವಂತೆ ಗ್ರಾಮಸ್ಥರು ಆಗ್ರಹಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ ಸದಸ್ಯರುಗಳಾದ ಸುಸ್ಸಾನ ಡಿಸೋಜಾ, ದಿನೇಶ್‌ ಕರ್ಕೇರಾ, ಎಸ್. ಬೇಬಿ ಸುವರ್ಣಾ, ಸುಧಾಕರ ಆಳ್ವ, ಜಯಂತಿ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ತುಳಸಿ ಬಿ., ರಾಜೇಶ್, ಐರಿನ್ ಮೊರಾಸ್, ಫಾರ್ಝನ, ವಿದ್ಯಾ ಪಿ. ಸಾಲಿಯಾನ್, ರುಬೀನಾ, ಗುಲಾಬಿ, ದಿನೇಶ್, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಿಡಿಓ ರಾಜ್ ಶೇಖರ್ ರೈ ಸ್ವಾಗತಿಸಿ , ಕಾರ್ಯದರ್ಶಿ ಯಶೋಧರ ವಂದಿಸಿದರು.

Related posts

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya
error: Content is protected !!