27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.26 ರಿಂದ ಪ್ರಾರಂಭಗೊಂಡು ಫೆ.28ರವರೆಗೆ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.27) ಬೆಳಿಗ್ಗೆ ಮಹಾಗಣಪತಿ ಹೋಮ, ಸ್ವಸ್ತಿ ಪುಣ್ಯಾಹ ವಾಚನ, ಬಿಂಬಶುದ್ಧಿ ಕಲಶ ಪೂಜೆ, ಚಂಡಿಕಾ ಹೋಮ , ಹೊರೆಕಾಣಿಕೆ ಸಮರ್ಪಣೆ, ಪಲ್ಲಕ್ಕಿ ಮೆರವಣಿಗೆ, ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಗೆ ಪೂರ್ಣ ಕುಂಭ ಸ್ವಾಗತ, ಬೆಳಿಗ್ಗೆ 10ಗಂಟೆಗೆ ಶ್ರೀಮತಿ ವಿನಯಾ ಮತ್ತು ವಾಮನ ತಾಮ್ಹನ್ ಕರ್ ಅರಸಿನಮಕ್ಕಿ ಹಾಗೂ ದಿವ್ಯ ಮತ್ತು ದಿವಾಕರ ಗುಡ್ಡೆತೋಟ ಇವರಿಂದ ಶ್ರೀದೇವಿಗೆ ಆಭರಣ ಸಹಿತ ಪಲ್ಲಕ್ಕಿ ಸಮರ್ಪಣೆಯು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರು, ಸಮಿತಿಯವರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಂಡಿಕಾ ಹೋಮ ಪೂರ್ಣಾಹುತಿ , ಸುವಾಸಿನಿ ಪೂಜೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ. ರಾತ್ರಿ ಶ್ರೀ ದೇವರ ಬಲಿ ಹೊರಟು ಪಲ್ಲಕ್ಕಿ ಉತ್ಸವ, ಕಟ್ಟೆ ಪೂಜೆಗಳು, ಅಷ್ಠ ಸೇವೆ, ಅಶ್ವತ್ಥ ಕಟ್ಟೆ ಉತ್ಸವ ನಡೆಯಲಿದೆ.

Related posts

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!