26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.26 ರಿಂದ ಪ್ರಾರಂಭಗೊಂಡು ಫೆ.28ರವರೆಗೆ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.27) ಬೆಳಿಗ್ಗೆ ಮಹಾಗಣಪತಿ ಹೋಮ, ಸ್ವಸ್ತಿ ಪುಣ್ಯಾಹ ವಾಚನ, ಬಿಂಬಶುದ್ಧಿ ಕಲಶ ಪೂಜೆ, ಚಂಡಿಕಾ ಹೋಮ , ಹೊರೆಕಾಣಿಕೆ ಸಮರ್ಪಣೆ, ಪಲ್ಲಕ್ಕಿ ಮೆರವಣಿಗೆ, ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಗೆ ಪೂರ್ಣ ಕುಂಭ ಸ್ವಾಗತ, ಬೆಳಿಗ್ಗೆ 10ಗಂಟೆಗೆ ಶ್ರೀಮತಿ ವಿನಯಾ ಮತ್ತು ವಾಮನ ತಾಮ್ಹನ್ ಕರ್ ಅರಸಿನಮಕ್ಕಿ ಹಾಗೂ ದಿವ್ಯ ಮತ್ತು ದಿವಾಕರ ಗುಡ್ಡೆತೋಟ ಇವರಿಂದ ಶ್ರೀದೇವಿಗೆ ಆಭರಣ ಸಹಿತ ಪಲ್ಲಕ್ಕಿ ಸಮರ್ಪಣೆಯು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರು, ಸಮಿತಿಯವರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಂಡಿಕಾ ಹೋಮ ಪೂರ್ಣಾಹುತಿ , ಸುವಾಸಿನಿ ಪೂಜೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ. ರಾತ್ರಿ ಶ್ರೀ ದೇವರ ಬಲಿ ಹೊರಟು ಪಲ್ಲಕ್ಕಿ ಉತ್ಸವ, ಕಟ್ಟೆ ಪೂಜೆಗಳು, ಅಷ್ಠ ಸೇವೆ, ಅಶ್ವತ್ಥ ಕಟ್ಟೆ ಉತ್ಸವ ನಡೆಯಲಿದೆ.

Related posts

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
error: Content is protected !!