32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.26 ರಿಂದ ಪ್ರಾರಂಭಗೊಂಡು ಫೆ.28ರವರೆಗೆ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು(ಫೆ.27) ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಗೆ ಪೂರ್ಣ ಕುಂಭ ಸ್ವಾಗತ ನೀಡಿ ನಂತರ ಶ್ರೀಮತಿ ವಿನಯಾ ಮತ್ತು ವಾಮನ ತಾಮ್ಹನ್ ಕರ್ ಅರಸಿನಮಕ್ಕಿ ಹಾಗೂ ದಿವ್ಯ ಮತ್ತು ದಿವಾಕರ ಗುಡ್ಡೆತೋಟ ಇವರಿಂದ ಶ್ರೀದೇವಿಗೆ ಆಭರಣ ಸಹಿತ ಪಲ್ಲಕ್ಕಿ ಸಮರ್ಪಿಸಿ, ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗಳು ಆರ್ಶೀವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಂದ ನೂತನ ಸಭಾ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.5 ಲಕ್ಷ ನೀಡಿದರು. ಇನೋರ್ವ ಮುಖ್ಯ ಅತಿಥಿ ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಉಪಸ್ಥಿತರಿದ್ದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರನ್ನು ಸ್ವಾಮೀಜಿ ಯವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ವಿನಯಾ ಮತ್ತು ವಾಮನ ತಾಮ್ಹನ್ ಕರ್ ಅರಸಿನಮಕ್ಕಿ ಹಾಗೂ ದಿವ್ಯ ಮತ್ತು ದಿವಾಕರ ಗುಡ್ಡೆತೋಟ , ವ್ಯವಸ್ಥಾಪನ ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಸ್ವಾಗತಿಸಿ, ಹತ್ಯಡ್ಕ ವ್ಯವಸಾಯಿಕ ಸಹಕಾರಿ ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ ನಿರೂಪಿಸಿ, ಧನ್ಯವಾದವಿತ್ತರು.

ನಂತರ ಚಂಡಿಕಾ ಹೋಮದ ಪೂರ್ಣಹುತಿಯು ನಡೆಯಿತು.

Related posts

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!