23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಬೆಳ್ತಂಗಡಿ ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಬೆಳಕಿಗೆ ಬಂದ ನಂತರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸೂಕ್ತ ಕ್ರಮಗಳನ್ನು ಕೈಗೊಂಡು ನೂತನ ಮೇಲ್ವಿಚಾರಕರನ್ನು ನೇಮಿಸಿದ್ದರು, ಆದರೆ ಇದೀಗ ಹಾಸ್ಟೆಲ್‌ನಲ್ಲಿ ಸಮಸ್ಯೆಗಳು ಪರಿಹಾರವಾಗಿರುವ ಬಗ್ಗೆ ವರದಿಯಾಗಿದೆ.

ವಸತಿ ನಿಲಯ ಅವ್ಯವಸ್ಥೆಯಿಂದ ಕೂಡಿದ್ದು ಮೆನುವಿನಲ್ಲಿ ಹಾಕಿರುವ ಯಾವುದೇ ಆಹಾರ ಸರಿಯಾಗಿ ನೀಡುವುದಿಲ್ಲ, ಆಹಾರ ರುಚಿಯೂ ಇರುವುದಿಲ್ಲ. ಯಾವುದೇ ಕಾರ್ಯಕ್ರಮ ಜರುಗುವುದಿಲ್ಲ. ಚಟುವಟಿಕೆಗಳಾಗಲಿ ಯಾವುದು ನಡೆಯುವುದಿಲ್ಲ. ಶೌಚಾಲಯ, ಸ್ನಾನದ ಕೊಠಡಿ ಸೇರಿದಂತೆ ಸ್ವಚ್ಛತಾ ವ್ಯವಸ್ಥೆ ಹದಗೆಟ್ಟಿದೆ. ಭಾಷಾ ತಾರಾತಮ್ಯತೆ ಹೆಚ್ಚಾಗಿದೆ. ಶೈಕ್ಷಣಿಕ ಚಟುವಟಿಕೆಗೆ ಯಾವುದೇ ರೀತಿಯ ಪ್ರೋತ್ಸಾಹ ದೊರೆಯುತ್ತಿಲ್ಲ, ಊರಿನವರು ಮತ್ತು ಹೊರಗಿನವರು (ಘಟ್ಟದವರು) ಎಂಬ ಬೇಧ-ಭಾವ ನಡೆಯುತ್ತಿದೆ, ಎಂದು ನೊಂದ ವಿದ್ಯಾರ್ಥಿನಿಯರು ಆರೋಪಿಸಿದ್ದರು. ಆದರೆ ಇದೀಗ ನೂತನ ವಾರ್ಡನ್ ನಿಯೋಜನೆ ಬಳಿಕ ಈ ಎಲ್ಲಾ ಸಮಸ್ಯೆಗಳು ವಸತಿ ನಿಲಯದಲ್ಲಿ ಬಗೆಹರಿದಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಚೆನ್ನಾಗಿ ನೋಡಿಕೊಳ್ಳುತ್ತಾರೆ: ವಸತಿ ನಿಲಯದಲ್ಲಿ ಬೀಳ್ಕೂಡುಗೆ ಕಾರ್ಯಕ್ರಮ ನಡೆಸಿದ್ದಾರೆ. ಮೆನು ಚಾರ್ಟ್ನಲ್ಲಿ ಆಹಾರ ಸಮರ್ಪಕವಾಗಿ ಸಿಗುತ್ತಿದೆ. ಈ ಹಿಂದೆ ಇದ್ದ ಎಲ್ಲಾ ಸಮಸ್ಯೆಗಳು ಹೊಸ ವಾರ್ಡನ್ ಡಾ. ಅರ್ಷಿಯಾ ರವರು ಬಂದ ಮೇಲೆ ಬಗೆಹರಿಸಿದ್ದಾರೆ. ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಸಮಸ್ಯೆಗಳನ್ನು ತಿಳಿಸಿದರೆ ಸ್ಪಂದಿಸುತ್ತಾರೆ ಎಂದು ವಿದ್ಯಾರ್ಥಿನಿಯೋರ್ವರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!