32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!