September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಹಾ ಶಿವರಾತ್ರಿಯ ದಿನದಂದು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ ೧೨ ಅಡಿ ಎತ್ತರದ ಪ್ರತಿಮೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರಿಸ್ ಕನಸಿನ ಮನೆ ಮಾಲೀಕರು, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್ ಇವರು ಫೆ.26ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ಮಿತ್ತಬಾಗಿಲು, ಭುಜಬಲಿ ಧರ್ಮಸ್ಥಳ, ಶಿವರಾತ್ರಿ ಉತ್ಸವ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ ವಳಂಬ್ರ, ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನಯ್ ಕುಮಾರ್, ಭಜನಾ ಸಮಿತಿ ಸಂಚಾಲಕ ಗಣೇಶ್ ಗೌಡ ಪಗರೆ, ಶ್ರೀ ದುರ್ಗಾ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಜಗದೀಶ್ ಕುಂಬಾರ, ಕೂಡಬೆಟ್ಟು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಎಂ.ಎಸ್, ಕಾರ್ಯಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಚಂದ್ರಯ್ಯ ಕುಂಬಾರ, ಮಿತ್ತಬಾಗಿಲು ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಕುಮಾರ್, ವಾಸುದೇವ ರಾವ್ ಕಕ್ಕೇನೆಜಿ ಉಪ ಸಮಿತಿಯ ಮುಖ್ಯಸ್ಥರು ಅರ್ಚಕ ವೃಂದ ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!